ಪಿವಿ ಪ್ರದೀಪ್ ಕುಮಾರ್ ಅವರ ಸಾರಥ್ಯದಲ್ಲಿ ಮಂಗಳೂರಿನ ಸಮೀಪ ನಡೆದ ಸಾಹಿತ್ಯ ಸಂಭ್ರಮದಲ್ಲಿ "ಸಾಹಿತ್ಯ ಜನಮನವನ್ನು ತಲುಪಬೇಕು, ಪುಸ್ತಕ ಓದುವ ಪ್ರವೃತ್ತಿ ಬೆಳಯಬೇಕು,ಪುಸ್ತಕಗಳನ್ನು ಪ್ರಕಟಣೆಗೆ ಸಹಕಾರ ನೀಡುವ ಮೂಲಕ ಬರೆಯುವವರಿಗೆ ಪ್ರೋತ್ಸಾಹ ನೀಡಬೇಕು" ಎಂದು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು. ಈ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಕಥಾಬಿಂದು ಪ್ರಕಾಶನ ಮಂಗಳೂರು, ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ನೇತ್ರಾವತಿ ಸಂಗಮ ಜೋಡುಮಾರ್ಗ ಮತ್ತು ಕ.ಚು.ಸಾ.ಪ. ದ.ಕ. ಬಂಟ್ವಾಳ ತಾಲೂಕು ಸಮಿತಿ ಅಶ್ರಯದಲ್ಲಿ ಭಯಂಕೇಶ್ವರ ದೇವಸ್ಥಾನ ಸಭಾಂಗಣ ಪಾಣೆಮಂಗಳೂರಿನಲ್ಲಿ ಜ.4 ರಂದು ಜರಗಿತು. ಮುಖ್ಯ ಅತಿಥಿಯಾಗಿ ಸೀನಿಯರ್ ಛೇಂಬರ್ ಅಧ್ಯಕ್ಷ ತೇವು ತಾರನಾಥ ಕೊಟ್ಟಾರಿ ,ಹಿರಿಯ ಸಾಹಿತಿ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಕ.ಚು.ಸಾ.ಪ ಬಂಟ್ವಾಳ ತಾಲೂಕು ಅಧ್ಯಕ್ಷ ರವೀಂದ್ರ ಕುಕ್ಕಾಜೆ, ಕವಯಿತ್ರಿ ಡಾ. ಶಾಂತ ಪುತ್ತೂರು ಸಮ್ಮೇಳನಕ್ಕೆ ಶುಭ ಹಾರೈಸಿ ಮಾತನಾಡಿದರು. ರಾಜ್ಯ ಮಟ್ಟದ ಕವಿಗೋಷ್ಠಿ ಹಿರಿಯ ಸಾಹಿತಿ ಜಯಾನಂದ ಪೆರಾಜೆ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಾ.ಮ. ಸತೀಶ್ ಬೆಂಗಳೂರು, ಶಾರದಾ ಮೊಳೆಯಾರ್, ಪ್ಲಾವಿಯಾ ಅಲ್ಬುಕರ್ಕ್ ಪುತ್ತೂರು, ಗೀತಾ ಕೊಂಕೋಡಿ, ಸೌಮ್ಯ ಆರ್. ಶೆಟ್ಟಿ, ರೋಹಿಣಿ ಆಚಾರ್ಯ ಪುತ್ತೂರು, ಮಲ್ಲಿಕಾಜೂನ ಕೆರೊಡಿ, ಸವಿತಾ ಕರ್ಕೆರ ಕಾವೂರು, ಸುರೇಶ ಎಮ್. ಹರಿಜನ, ಅಶ್ವಿಜ ಶ್ರೀಧರ, ಮಮತ ಡಿ.ಕೆ. ಸುರೇಶ್ ಕುಮಾರ್ ಚಾರ್ವಕ, ಜಯರಾಮ ಪಡ್ರೆ, ಶಿಲ್ಪ ಎನ್., ವಿಂದ್ಯಾ ಕುದ್ಪಾಜೆ, ಶ್ವೇತಾ ಡಿ ಬಡಗಬೆಳ್ಳೂರು, ರಮೇಶ್ ಮೆಲ್ಕಾರ್, ರಜನಿ ಚಿಕ್ಕಯ್ಯಮಠ ಮೊದಲಾದವರು ಸ್ವರಚಿತ ಕವನ ವಾಚಿಸಿದರು.
ಕನ್ನಡ ರತ್ನ ರಾಜ್ಯ ಪ್ರಶಸ್ತಿ ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಪತ್ರಕರ್ತೆ ವಾಣಿ ರಘುನಾಥ್ ಮುಂಬೈ, ಡಾ. ಜೋಸೆಫ್ ಲೋಬೋ, ಯಾದವ ಹರೀಶ್, ರಕ್ತದಾನಿ ಮಂಜು ಮೈಸೂರು, ಪೂರ್ಣಿಮಾ ಗುರುಮೂರ್ತಿ, ಅನಿಲ್ ಮೆಂಡೋನ್ಸಾ, ಮಂಜುನಾಥ ಕೆ ಮೈಸೂರು, ಲಯನ್ ಕುಮಾರ್, ಕುಮಾರಿ ಅರ್ನಾ ಎಸ್. ಭಟ್ ಇವರನ್ನು ಕನ್ನಡ ರತ್ನ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
Comments (0)
Post Comment
Report Abuse
Be the first to comment using the form below.